
ಹೈಕಮಾಂಡ್ ಭೇಟಿ ಮಾಡಿ, ಬೆಂಗಳೂರಿನ ಕೆಂಪೇಗೌಡ ಏರ್ಪೋರ್ಟ್ಗೆ ಬಂದಿಳಿದ ಡಿಕೆಶಿ,ಈ ವೇಳೆ ಕೆಲವೇ ಶಾಸಕರ ಬೆಂಬಲ ಡಿ.ಕೆ ಶಿವಕುಮಾರ್ಗಿದೆ ಎಂಬ ಸಿಎಂ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದರು.
ನಾನು ಪಕ್ಷದ ಅಧ್ಯಕ್ಷನಾಗಿದ್ದೇನೆ. ಪಾರ್ಟಿಯವರು ಏನು ಹೇಳಿದ್ದಾರೆ ಅಂತ ಈಗಾಗಲೇ ಸಿಎಂ ಹೇಳಿದ್ದಾರೆ, ನಾನು ಮುಖ್ಯಮಂತ್ರಿಗಳ ಹೇಳಿಕೆಯನ್ನ ಗಮನಿಸಿದ್ದೇನೆ. ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಸಿಎಂ ಅವರೇ ಉತ್ತರಿಸಿದ್ದಾರೆ. ಸಿಎಂ ಅವರು ಮಾತನಾಡಿದ ಮೇಲೆ ಪದೇ ಪದೇ ನಾನು ಮಾತನಾಡೋದು ಸರಿಯಲ್ಲ ಎಂದಿದ್ದಾರೆ.
ಅಲ್ಲದೇ ಅಧಿಕಾರ ಶೇರಿಂಗ್ ಬಗ್ಗೆ ನಮಗೆ ಗಾಬರಿ ಇಲ್ಲ. ನಿಮಗ್ಯಾಕೆ ಗಾಬರಿ ಅಂತಾ ಮಾಧ್ಯಮಗಳನ್ನು ಪ್ರಶ್ನಿಸಿದರು. ಬಳಿಕ ಡಿಕೆಶಿ ಸಿಎಂ ಆಗಬೇಕೆಂದು ಸಾಕಷ್ಟು ಬೆಂಬಲಿಗರಿಗೆ ಆಸೆ ಇದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಎಲ್ಲರಿಗೂ ಆಸೆಗಳು ಇರುತ್ತದೆ. ಈ ಬಗ್ಗೆ ನಾನು ಸದ್ಯಕ್ಕೆ ಮಾತನಾಡಲ್ಲ. ಕಾಮೆಂಟ್ ಮಾಡುವ ಅವಶ್ಯಕತೆ ನನಗಿಲ್ಲ. ಮಾತನಾಡುವವರೇ ಎಲ್ಲಾ ಪ್ರಶ್ನೆಗಳನ್ನ ಮತ್ತು ಉತ್ತರಗಳನ್ನ ಅವರೇ ಕೊಡುತ್ತಿದ್ದಾರೆ ಎಂದು ಹೇಳಿದ್ದಾರೆ.