
ಕಲಬುರಗಿ: ಪ್ರಿಯಾಂಕ್ ಖರ್ಗೆ ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಸಿಎಂ ಬದಲಾವಣೆ ಪ್ರಸ್ತಾಪ ಹೈಕಮಾಂಡ್ ಮುಂದೆ ಇಲ್ಲ. ಅಂತಹ ಪ್ರಸ್ತಾವನೆ ಇದ್ದಿದ್ರೆ ಸ್ವಲ್ಪನಾದ್ರೂ ನಮಗೂ ಗೊತ್ತಾಗುತ್ತಿತ್ತಲ್ಲ. ಸಿಎಂ ಬದಲಾವಣೆ ಊಹಾಪೋಹ ಎಂದು ಸ್ಪಷ್ಟಪಡಿಸಿದರು.
ಎಂ.ಬಿ ಪಾಟೀಲ್ ಅವರು ಹೇಳಿದ್ದೇ ಬೇರೆ ಮಾಧ್ಯಮಗಳು ಅರ್ಥೈಸಿಕೊಂಡಿದ್ದೇ ಬೇರೆ. ಮುಂದೆ ಮುಖ್ಯಮಂತ್ರಿಯಾಗಬೇಕೆಂಬ ಆಸೆ ವ್ಯಕ್ತಪಡಿಸಿದ್ದಾರಷ್ಟೆ. ಆದರೆ ಸಿಎಂ ಬದಲಾವಣೆ ಅನ್ನೋದು ಕೇವಲ ಮಾಧ್ಯಮಗಳಿಗಷ್ಟೇ ಸೀಮಿತವಾಗಿದೆ ಎಂದು ಹೇಳಿದರು.













