
ರಾಜ್ಯದಲ್ಲಿ ಹಲವು ದಿನಗಳಿಂದ ಚಳಿಯ ವಾತಾವರಣವಿದ್ದು ಇಂದು ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಂಜು ಮತ್ತು ಒಣಹವೆ ಜನರ ಜೀವನದ ಮೇಲೆ ಪ್ರಭಾವ ಬೀರಲಿದ್ದು ರಾಜ್ಯದ ಏಳು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ದಾವಣಗೆರೆ, ಹಾವೇರಿ, ಬಾಗಲಕೋಟೆ ,ಬೀದರ್, ಕಲಬುರಗಿ, ವಿಜಯಪುರ, ಗದಗ ಜಿಲ್ಲೆಗಳಲ್ಲಿ ಚಳಿಯ ಪ್ರಮಾಣ ಹೆಚ್ಚಿರಲಿದೆ.
ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ ,ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.
ಬೆಂಗಳೂರು ನಗರದಲ್ಲೂ ಚಳಿಯ ಪ್ರಮಾಣ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.



















