
ಹಲವು ನಗರಗಳಲ್ಲಿ ಚಳಿಯ ಪ್ರಮಾಣ ಏರಿಕೆಯಾಗಿದ್ದು ಒಣಹವೆ ವಾತಾವರಣವಿದೆ.
ಕರಾವಳಿ ಸೇರಿದಂತೆ ಉತ್ತರವಳನಾಡು ಮತ್ತು ದಕ್ಷಿಣ ಒಳನಾಡಿನಲ್ಲೂ ಚಳಿಯ ಪ್ರಮಾಣ ಏರಿಕೆ ಕಂಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಇದೇ ರೀತಿಯ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು, ಬಳ್ಳಾರಿ, ಚಾಮರಾಜನಗರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ ,ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.
ಬೆಂಗಳೂರು ನಗರದಲ್ಲಿ, ಮಂಜು ಕವಿದ ವಾತಾವರಣವಿರಲಿದ್ದು ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.








