
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರದಲ್ಲಿ ಸಾಧಾರಣ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪ್ರಭಾವದಿಂದಾಗಿ ಮೇ 14ರಿಂದ ಮೇ 16ರವರೆಗೆ ರಾಜ್ಯದ ಹಲವು ಕಡೆ ಆಲಿಕಲ್ಲು ಮಳೆಯ ಸಾಧ್ಯತೆ ಇದೆ.
ಜೂನ್ ಮೊದಲ ವಾರದಲ್ಲಿ ಕರ್ನಾಟಕಕ್ಕೆ ಮುಂಗಾರು ಪ್ರವೇಶಿಸುವ ಲಕ್ಷಣಗಳಿವೆ.






















